ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya



ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ವಹಿಸಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು. ಪ್ರತೀಕ್ 9ನೇ ತರಗತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Leave a Comment

error: Content is protected !!