26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿಯನ್ನು ಮಚ್ಚಿನ ಗ್ರಾಮದಲ್ಲಿ ಸುಂದರ ಪೂಜಾರಿ ಅವರ ಕಟ್ಟಡದಲ್ಲಿ ಆ.29ರಂದು ಉದ್ಘಾಟನೆಗೊಂಡಿತು.

ಪ್ರಗತಿಪರ ಕೃಷಿಕರಾದ ಕೃಷ್ಣ ಪ್ರಭು ಮುದಲಡ್ಕ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾಗಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇರು ಮಾತನಾಡಿ ಒಂದೇ ಮನಸ್ಸಿನ ಸದಸ್ಯರು ಒಟ್ಟುಗೂಡಿ ಸಂಘವನ್ನು ರಚಿಸಿ ಉಳಿತಾಯ ಮಾಡಿ ಸಾಲವನ್ನು ಪಡೆದು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯರು ಪ್ರಮೋದ್ ಕುಮಾರ್, ಸದಸ್ಯರಾದ ಶುಭಕರ, ಡಾ. ಮಾಧವ ಕೆ ಶೆಟ್ಟಿ ಬಳ್ಳಮಂಜ, ವಲಯದ ಸೇವಾ ದೀಕ್ಷಿತೆಯರಾದ ಜಯಮಾಲಾ, ಪುಷ್ಪವತಿ, ಶಶಿಕಲಾ, ಸರೋಜಿನಿ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು, ವಲಯ ಸಂಯೋಜಕಿ ಸುಮಿತ್ರ ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಕಾರ್ಯಕಮ ನಿರೂಪಿಸಿ, ಪುರಂದರ ಸ್ವಾಗತಿಸಿದರು. ಮಚ್ಚಿನ ಗ್ರಾಮದ ಸೇವಾ ದೀಕ್ಷಿತೆ ಮಂಜುಳಾ ಶರ್ಮ ಧನ್ಯವಾದವಿತ್ತರು.

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya
error: Content is protected !!