38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿಯನ್ನು ಮಚ್ಚಿನ ಗ್ರಾಮದಲ್ಲಿ ಸುಂದರ ಪೂಜಾರಿ ಅವರ ಕಟ್ಟಡದಲ್ಲಿ ಆ.29ರಂದು ಉದ್ಘಾಟನೆಗೊಂಡಿತು.

ಪ್ರಗತಿಪರ ಕೃಷಿಕರಾದ ಕೃಷ್ಣ ಪ್ರಭು ಮುದಲಡ್ಕ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾಗಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇರು ಮಾತನಾಡಿ ಒಂದೇ ಮನಸ್ಸಿನ ಸದಸ್ಯರು ಒಟ್ಟುಗೂಡಿ ಸಂಘವನ್ನು ರಚಿಸಿ ಉಳಿತಾಯ ಮಾಡಿ ಸಾಲವನ್ನು ಪಡೆದು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯರು ಪ್ರಮೋದ್ ಕುಮಾರ್, ಸದಸ್ಯರಾದ ಶುಭಕರ, ಡಾ. ಮಾಧವ ಕೆ ಶೆಟ್ಟಿ ಬಳ್ಳಮಂಜ, ವಲಯದ ಸೇವಾ ದೀಕ್ಷಿತೆಯರಾದ ಜಯಮಾಲಾ, ಪುಷ್ಪವತಿ, ಶಶಿಕಲಾ, ಸರೋಜಿನಿ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು, ವಲಯ ಸಂಯೋಜಕಿ ಸುಮಿತ್ರ ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಕಾರ್ಯಕಮ ನಿರೂಪಿಸಿ, ಪುರಂದರ ಸ್ವಾಗತಿಸಿದರು. ಮಚ್ಚಿನ ಗ್ರಾಮದ ಸೇವಾ ದೀಕ್ಷಿತೆ ಮಂಜುಳಾ ಶರ್ಮ ಧನ್ಯವಾದವಿತ್ತರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya
error: Content is protected !!