25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿಯನ್ನು ಮಚ್ಚಿನ ಗ್ರಾಮದಲ್ಲಿ ಸುಂದರ ಪೂಜಾರಿ ಅವರ ಕಟ್ಟಡದಲ್ಲಿ ಆ.29ರಂದು ಉದ್ಘಾಟನೆಗೊಂಡಿತು.

ಪ್ರಗತಿಪರ ಕೃಷಿಕರಾದ ಕೃಷ್ಣ ಪ್ರಭು ಮುದಲಡ್ಕ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾಗಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇರು ಮಾತನಾಡಿ ಒಂದೇ ಮನಸ್ಸಿನ ಸದಸ್ಯರು ಒಟ್ಟುಗೂಡಿ ಸಂಘವನ್ನು ರಚಿಸಿ ಉಳಿತಾಯ ಮಾಡಿ ಸಾಲವನ್ನು ಪಡೆದು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯರು ಪ್ರಮೋದ್ ಕುಮಾರ್, ಸದಸ್ಯರಾದ ಶುಭಕರ, ಡಾ. ಮಾಧವ ಕೆ ಶೆಟ್ಟಿ ಬಳ್ಳಮಂಜ, ವಲಯದ ಸೇವಾ ದೀಕ್ಷಿತೆಯರಾದ ಜಯಮಾಲಾ, ಪುಷ್ಪವತಿ, ಶಶಿಕಲಾ, ಸರೋಜಿನಿ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು, ವಲಯ ಸಂಯೋಜಕಿ ಸುಮಿತ್ರ ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಕಾರ್ಯಕಮ ನಿರೂಪಿಸಿ, ಪುರಂದರ ಸ್ವಾಗತಿಸಿದರು. ಮಚ್ಚಿನ ಗ್ರಾಮದ ಸೇವಾ ದೀಕ್ಷಿತೆ ಮಂಜುಳಾ ಶರ್ಮ ಧನ್ಯವಾದವಿತ್ತರು.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!