23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!