25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!