July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
error: Content is protected !!