25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!