April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು.

ಲಾಯಿಲ ಗ್ರಾಮದ ಹಳೆಪೇಟೆ ಎಂಬಲ್ಲಿ ಸುಮಾರು ವರ್ಷಗಳಿಂದ ನ್ಯಾಯ ಬೆಲೆ ಅಂಗಡಿಯ ಕೊರತೆ ಇದ್ದು, ಇದರಿಂದಾಗಿ ನ್ಯಾಯ ಬೆಲೆ ಅಂಗಡಿಗಾಗಿ ಪ್ರಸಕ್ತ ಉಜಿರೆಯಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ಅವಲಂಬಿಸಬೇಕಾದ ಅನಿವಾರ್ಯ ಇದ್ದು,ಇಲ್ಲಿ ಟೋಕನ್ ಪಡೆದು ಎರಡು ಗ್ರಾಮದ ಎಲ್ಲಾ ಕಾರ್ಡ್ ದಾರರು ಕಾದು ನಿಂತುಕೊಂಡು ಹೋಗುವ ಪರಿಸ್ಥಿತಿ ಇದೆ. ಅದಲ್ಲದೆ ಸುಡು ಬಿಸಿಲಿನಲ್ಲಿ ವಯಸ್ಕರು ಹಾಗು ಸ್ತ್ರೀಯರು ಕಾದು ನಿಂತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೆಲವು ದಿನಗಳ ಮುಂಚಿತವಾಗಿ ಒಂದು ವಯಸ್ಸಾದ ಸ್ತ್ರೀ ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆಯು ನಡೆದಿದೆ. ಉಜಿರೆಯ ನ್ಯಾಯ ಬೆಲೆ ಅಂಗಡಿಯಲ್ಲಿ ಒಂದೇ ಕಂಪ್ಯೂಟರ್ ಹಾಗೂ ಸಿಬ್ಬಂದಿ ಇದ್ದು ಸಮಯ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ.


ಈ ಎಲ್ಲಾ ವಿಷಯಗಳನ್ನು ಮನಗಂಡು ಲಾಯಿಲ ಗ್ರಾಮದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಈಡೇರಿಸುವಂತೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ ಹಾಗೂ ಸಹಲ್ ನೀರ್ಸಾಲ್, ಫಾಝಿಲ್ ಹಾಗೂ ತಂಝಿಲ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!