25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು.

ಲಾಯಿಲ ಗ್ರಾಮದ ಹಳೆಪೇಟೆ ಎಂಬಲ್ಲಿ ಸುಮಾರು ವರ್ಷಗಳಿಂದ ನ್ಯಾಯ ಬೆಲೆ ಅಂಗಡಿಯ ಕೊರತೆ ಇದ್ದು, ಇದರಿಂದಾಗಿ ನ್ಯಾಯ ಬೆಲೆ ಅಂಗಡಿಗಾಗಿ ಪ್ರಸಕ್ತ ಉಜಿರೆಯಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ಅವಲಂಬಿಸಬೇಕಾದ ಅನಿವಾರ್ಯ ಇದ್ದು,ಇಲ್ಲಿ ಟೋಕನ್ ಪಡೆದು ಎರಡು ಗ್ರಾಮದ ಎಲ್ಲಾ ಕಾರ್ಡ್ ದಾರರು ಕಾದು ನಿಂತುಕೊಂಡು ಹೋಗುವ ಪರಿಸ್ಥಿತಿ ಇದೆ. ಅದಲ್ಲದೆ ಸುಡು ಬಿಸಿಲಿನಲ್ಲಿ ವಯಸ್ಕರು ಹಾಗು ಸ್ತ್ರೀಯರು ಕಾದು ನಿಂತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೆಲವು ದಿನಗಳ ಮುಂಚಿತವಾಗಿ ಒಂದು ವಯಸ್ಸಾದ ಸ್ತ್ರೀ ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆಯು ನಡೆದಿದೆ. ಉಜಿರೆಯ ನ್ಯಾಯ ಬೆಲೆ ಅಂಗಡಿಯಲ್ಲಿ ಒಂದೇ ಕಂಪ್ಯೂಟರ್ ಹಾಗೂ ಸಿಬ್ಬಂದಿ ಇದ್ದು ಸಮಯ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ.


ಈ ಎಲ್ಲಾ ವಿಷಯಗಳನ್ನು ಮನಗಂಡು ಲಾಯಿಲ ಗ್ರಾಮದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಈಡೇರಿಸುವಂತೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ ಹಾಗೂ ಸಹಲ್ ನೀರ್ಸಾಲ್, ಫಾಝಿಲ್ ಹಾಗೂ ತಂಝಿಲ್ ಉಪಸ್ಥಿತರಿದ್ದರು.

Related posts

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya
error: Content is protected !!