22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು.

ಲಾಯಿಲ ಗ್ರಾಮದ ಹಳೆಪೇಟೆ ಎಂಬಲ್ಲಿ ಸುಮಾರು ವರ್ಷಗಳಿಂದ ನ್ಯಾಯ ಬೆಲೆ ಅಂಗಡಿಯ ಕೊರತೆ ಇದ್ದು, ಇದರಿಂದಾಗಿ ನ್ಯಾಯ ಬೆಲೆ ಅಂಗಡಿಗಾಗಿ ಪ್ರಸಕ್ತ ಉಜಿರೆಯಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ಅವಲಂಬಿಸಬೇಕಾದ ಅನಿವಾರ್ಯ ಇದ್ದು,ಇಲ್ಲಿ ಟೋಕನ್ ಪಡೆದು ಎರಡು ಗ್ರಾಮದ ಎಲ್ಲಾ ಕಾರ್ಡ್ ದಾರರು ಕಾದು ನಿಂತುಕೊಂಡು ಹೋಗುವ ಪರಿಸ್ಥಿತಿ ಇದೆ. ಅದಲ್ಲದೆ ಸುಡು ಬಿಸಿಲಿನಲ್ಲಿ ವಯಸ್ಕರು ಹಾಗು ಸ್ತ್ರೀಯರು ಕಾದು ನಿಂತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೆಲವು ದಿನಗಳ ಮುಂಚಿತವಾಗಿ ಒಂದು ವಯಸ್ಸಾದ ಸ್ತ್ರೀ ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆಯು ನಡೆದಿದೆ. ಉಜಿರೆಯ ನ್ಯಾಯ ಬೆಲೆ ಅಂಗಡಿಯಲ್ಲಿ ಒಂದೇ ಕಂಪ್ಯೂಟರ್ ಹಾಗೂ ಸಿಬ್ಬಂದಿ ಇದ್ದು ಸಮಯ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ.


ಈ ಎಲ್ಲಾ ವಿಷಯಗಳನ್ನು ಮನಗಂಡು ಲಾಯಿಲ ಗ್ರಾಮದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಈಡೇರಿಸುವಂತೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ ಹಾಗೂ ಸಹಲ್ ನೀರ್ಸಾಲ್, ಫಾಝಿಲ್ ಹಾಗೂ ತಂಝಿಲ್ ಉಪಸ್ಥಿತರಿದ್ದರು.

Related posts

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!