24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು.

ಲಾಯಿಲ ಗ್ರಾಮದ ಹಳೆಪೇಟೆ ಎಂಬಲ್ಲಿ ಸುಮಾರು ವರ್ಷಗಳಿಂದ ನ್ಯಾಯ ಬೆಲೆ ಅಂಗಡಿಯ ಕೊರತೆ ಇದ್ದು, ಇದರಿಂದಾಗಿ ನ್ಯಾಯ ಬೆಲೆ ಅಂಗಡಿಗಾಗಿ ಪ್ರಸಕ್ತ ಉಜಿರೆಯಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ಅವಲಂಬಿಸಬೇಕಾದ ಅನಿವಾರ್ಯ ಇದ್ದು,ಇಲ್ಲಿ ಟೋಕನ್ ಪಡೆದು ಎರಡು ಗ್ರಾಮದ ಎಲ್ಲಾ ಕಾರ್ಡ್ ದಾರರು ಕಾದು ನಿಂತುಕೊಂಡು ಹೋಗುವ ಪರಿಸ್ಥಿತಿ ಇದೆ. ಅದಲ್ಲದೆ ಸುಡು ಬಿಸಿಲಿನಲ್ಲಿ ವಯಸ್ಕರು ಹಾಗು ಸ್ತ್ರೀಯರು ಕಾದು ನಿಂತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೆಲವು ದಿನಗಳ ಮುಂಚಿತವಾಗಿ ಒಂದು ವಯಸ್ಸಾದ ಸ್ತ್ರೀ ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆಯು ನಡೆದಿದೆ. ಉಜಿರೆಯ ನ್ಯಾಯ ಬೆಲೆ ಅಂಗಡಿಯಲ್ಲಿ ಒಂದೇ ಕಂಪ್ಯೂಟರ್ ಹಾಗೂ ಸಿಬ್ಬಂದಿ ಇದ್ದು ಸಮಯ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ.


ಈ ಎಲ್ಲಾ ವಿಷಯಗಳನ್ನು ಮನಗಂಡು ಲಾಯಿಲ ಗ್ರಾಮದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಈಡೇರಿಸುವಂತೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ ಹಾಗೂ ಸಹಲ್ ನೀರ್ಸಾಲ್, ಫಾಝಿಲ್ ಹಾಗೂ ತಂಝಿಲ್ ಉಪಸ್ಥಿತರಿದ್ದರು.

Related posts

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya
error: Content is protected !!