23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

ಉಜಿರೆ : “ಆರೋಗ್ಯದ ಕಡೆ ಗಮನಹರಿಸಿ. ಗೂಗಲ್ ವೈದ್ಯ ಹಾಗೂ ಗೂಗಲ್ ರೋಗಿ ಆಗಬೇಡಿ” ಎಂದು ಉಜಿರೆಯ ಎಸ್.ಡಿ.ಎಮ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಆರ್ಥೋಪೆಡಿಷನ್ ಡಾ. ಹೆಚ್ ಶತಾನಂದ ಪ್ರಸಾದ್ ರಾವ್ ಹೇಳಿದರು.

ಇವರು ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಆ.30 ರಂದು ರೋಟರಿ ಕ್ಲಬ್ ಹಾಗೂ ಶಾಲೆಯ ಇಂಟರಾಕ್ಟ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರೋಟರಿ ಕ್ಲಬ್ ನ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಶಿಕ್ಷಕಿ ಕಲ್ಯಾಣಿ ರಾವ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೋಹನ್ ನಿರೂಪಿಸಿ, ವಿದ್ಯಾರ್ಥಿನಿ ಇಶಿತ ಸ್ವಾಗತಿಸಿ ವಿದ್ಯಾರ್ಥಿ ಕುನಾಲ್ ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya
error: Content is protected !!