24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯದಲ್ಲಿ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತ್ಯೇಕವಾಗಿ ಅರ್ಜಿ ಹಾಕಲು ವಿಶೇಷ ಅವಕಾಶ. ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯನ್ನು ರೈತರಿಗೆ ಹಾಗು ರೈತ ಮಹಿಳೆಯರಿಗೆ ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಆ.31ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಕೃಷಿ ಪಂಡಿತ ಪ್ರಶಸ್ತಿಯ ಬಹುಮಾನದ ಮೊತ್ತ ಈ ಕೆಳಕಂಡಂತೆ ನಿಗಧಿಪಡಿಸಲಾಗಿರುತ್ತದೆ.

ಬಹುಮಾನ ಮೊತ್ತ(ರೂಪಾಯಿಗಳಲ್ಲಿ) ಪ್ರಥಮ 125000, ದ್ವಿತೀಯ 100000, ತೃತೀಯ 75000, ಕೃಷಿ ಪಂಡಿತ – ಉದಯೋನ್ಮುಖ 50000,

ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

Related posts

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!