September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Related posts

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಕನ್ನಾಜೆ ಕಾರ್ಯಕ್ಷೇತ್ರದ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya
error: Content is protected !!