22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya
error: Content is protected !!