24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ



ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ವಹಿಸಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು. ಪ್ರತೀಕ್ 9ನೇ ತರಗತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Related posts

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya
error: Content is protected !!