September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ



ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ವಹಿಸಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು. ಪ್ರತೀಕ್ 9ನೇ ತರಗತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Related posts

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya
error: Content is protected !!