ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Leave a Comment

error: Content is protected !!