23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!