22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya
error: Content is protected !!