ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!