25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಬಿ ಕೆ ಹರಿಪ್ರಸಾದ್‌ರವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದಿಂದ ಆಗ್ರಹ: ಸಂಜೀವ ಪೂಜಾರಿ

Suddi Udaya
error: Content is protected !!