30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya
error: Content is protected !!