July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya
error: Content is protected !!