September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು.

ಲಾಯಿಲ ಗ್ರಾಮದ ಹಳೆಪೇಟೆ ಎಂಬಲ್ಲಿ ಸುಮಾರು ವರ್ಷಗಳಿಂದ ನ್ಯಾಯ ಬೆಲೆ ಅಂಗಡಿಯ ಕೊರತೆ ಇದ್ದು, ಇದರಿಂದಾಗಿ ನ್ಯಾಯ ಬೆಲೆ ಅಂಗಡಿಗಾಗಿ ಪ್ರಸಕ್ತ ಉಜಿರೆಯಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ಅವಲಂಬಿಸಬೇಕಾದ ಅನಿವಾರ್ಯ ಇದ್ದು,ಇಲ್ಲಿ ಟೋಕನ್ ಪಡೆದು ಎರಡು ಗ್ರಾಮದ ಎಲ್ಲಾ ಕಾರ್ಡ್ ದಾರರು ಕಾದು ನಿಂತುಕೊಂಡು ಹೋಗುವ ಪರಿಸ್ಥಿತಿ ಇದೆ. ಅದಲ್ಲದೆ ಸುಡು ಬಿಸಿಲಿನಲ್ಲಿ ವಯಸ್ಕರು ಹಾಗು ಸ್ತ್ರೀಯರು ಕಾದು ನಿಂತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೆಲವು ದಿನಗಳ ಮುಂಚಿತವಾಗಿ ಒಂದು ವಯಸ್ಸಾದ ಸ್ತ್ರೀ ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆಯು ನಡೆದಿದೆ. ಉಜಿರೆಯ ನ್ಯಾಯ ಬೆಲೆ ಅಂಗಡಿಯಲ್ಲಿ ಒಂದೇ ಕಂಪ್ಯೂಟರ್ ಹಾಗೂ ಸಿಬ್ಬಂದಿ ಇದ್ದು ಸಮಯ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ.


ಈ ಎಲ್ಲಾ ವಿಷಯಗಳನ್ನು ಮನಗಂಡು ಲಾಯಿಲ ಗ್ರಾಮದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಈಡೇರಿಸುವಂತೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ ಹಾಗೂ ಸಹಲ್ ನೀರ್ಸಾಲ್, ಫಾಝಿಲ್ ಹಾಗೂ ತಂಝಿಲ್ ಉಪಸ್ಥಿತರಿದ್ದರು.

Related posts

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya
error: Content is protected !!