25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು.

ಲಾಯಿಲ ಗ್ರಾಮದ ಹಳೆಪೇಟೆ ಎಂಬಲ್ಲಿ ಸುಮಾರು ವರ್ಷಗಳಿಂದ ನ್ಯಾಯ ಬೆಲೆ ಅಂಗಡಿಯ ಕೊರತೆ ಇದ್ದು, ಇದರಿಂದಾಗಿ ನ್ಯಾಯ ಬೆಲೆ ಅಂಗಡಿಗಾಗಿ ಪ್ರಸಕ್ತ ಉಜಿರೆಯಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ಅವಲಂಬಿಸಬೇಕಾದ ಅನಿವಾರ್ಯ ಇದ್ದು,ಇಲ್ಲಿ ಟೋಕನ್ ಪಡೆದು ಎರಡು ಗ್ರಾಮದ ಎಲ್ಲಾ ಕಾರ್ಡ್ ದಾರರು ಕಾದು ನಿಂತುಕೊಂಡು ಹೋಗುವ ಪರಿಸ್ಥಿತಿ ಇದೆ. ಅದಲ್ಲದೆ ಸುಡು ಬಿಸಿಲಿನಲ್ಲಿ ವಯಸ್ಕರು ಹಾಗು ಸ್ತ್ರೀಯರು ಕಾದು ನಿಂತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೆಲವು ದಿನಗಳ ಮುಂಚಿತವಾಗಿ ಒಂದು ವಯಸ್ಸಾದ ಸ್ತ್ರೀ ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆಯು ನಡೆದಿದೆ. ಉಜಿರೆಯ ನ್ಯಾಯ ಬೆಲೆ ಅಂಗಡಿಯಲ್ಲಿ ಒಂದೇ ಕಂಪ್ಯೂಟರ್ ಹಾಗೂ ಸಿಬ್ಬಂದಿ ಇದ್ದು ಸಮಯ ಹಾಗೂ ಸರ್ವರ್ ಸಮಸ್ಯೆ ಎಂದು ಹೇಳುತ್ತಾರೆ.


ಈ ಎಲ್ಲಾ ವಿಷಯಗಳನ್ನು ಮನಗಂಡು ಲಾಯಿಲ ಗ್ರಾಮದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಈಡೇರಿಸುವಂತೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ಕುಂಟಿನಿ ಬ್ರಾಂಚ್ ಅಧ್ಯಕ್ಷರು ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ ಹಾಗೂ ಸಹಲ್ ನೀರ್ಸಾಲ್, ಫಾಝಿಲ್ ಹಾಗೂ ತಂಝಿಲ್ ಉಪಸ್ಥಿತರಿದ್ದರು.

Related posts

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya
error: Content is protected !!