24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಹೊಸ ಬಸ್ಸು ತಂಗುದಾನದ ಸಭಾಭವನದಲ್ಲಿ ನಡೆಯಿತು.

ಗ್ರಾಮಸಭೆಯ ಪ್ರಾರಂಭದಲ್ಲಿ ಅಗಲಿದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು.

ಭಾರಿ ಮಳೆಗೆ ಸರಕಾರಿ ಪ್ರೌಢ ಶಾಲೆ ವೇಣೂರು ಕುಸಿಯುವ ಹಂತಕ್ಕೆ ತಲುಪಿದೆ. ಶಾಲೆಯ ಕಂಪೌಂಡ್, ಗೋಡೆ,ಮಾಡು ಬೀಳುವ ಹಂತದಲ್ಲಿದೆ. ಒಂದು ವೇಳೆ ಬರೆ ಬಿದ್ದು ಪ್ರೌಢ ಶಾಲೆ ನೆಲಸಮವಾದರೆ ವಿದ್ಯಾರ್ಥಿಗಳ ಗತಿಯೇನು. ಇಗಾಗಲೇ ರಾತ್ರಿ 1.30 ಗಂಟೆ ತನಕ ಮಕ್ಕಳ ಹೆತ್ತವರು, ಊರುವವರು ಶ್ರಮದಾನ ಮಾಡುತ್ತಿದ್ದರೆ. ಶಾಲೆಯ ಪ್ರೌಢ ಶಾಲೆ ದುರಸ್ಥಿಗೆ ಪಂಚಾಯತ್ ನಿಂದ ಕೂಡಲೇ 5 ಲಕ್ಷದ ಚೆಕ್ ನೀಡಬೇಕೆಂದು ಮಾಜಿ ಗ್ರಾ.ಪಂ ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಒತ್ತಾಯಿಸಿದರು.

ಮಂಗಗಳ ಹಾವಳಿಯಿಂದ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ವೇಣೂರಿನಲ್ಲಿ ಮಂಕಿ ಪಾರ್ಕ್ ನಿರ್ಮಿಸಲು ಗ್ರಾಮಸ್ಥರು ಒತ್ತಾಯಿಸಿದರು.

ಮಲೆನಾಡು ಪ್ರದೇಶದಲಿ ಮಂಗಳ ಹಾವಳಿಯಿದೆ. ಇದರ ಬಗ್ಗೆ ವಿಧಾನಸಭೆಯಲ್ಲಿಯೂ ಚರ್ಚೆಗಳು ನಡೆದಿವೆ ಎಂದು ವಲಯ ಅರಣ್ಯ ಅಧಿಕಾರಿ ತಿಳಿಸಿದರು.

ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ಆಚಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್, ಸದಸ್ಯರಾದ ಸುಮ,ಮಾಲತಿ,ಅರುಣ ಹೆಗ್ಡೆ,ಜಿನ್ನು,ಶೈಲಜಾ,ಸುಂದರ ಹೆಗ್ಡೆ,ಅನೂಪ್ ಜೆ ಪಾಯಸ್,ವೀಣಾ , ನೇಮಯ್ಯ, ಹರೀಶ್, ಶುಭ, ಸುಚಿತ್ರಾ, ಜಯಂತಿ, ದಿನೇಶ, ವಸಂತಿ, ಸಂಭಾಷಿಣಿ, ಅರುಣಾ ಕ್ರಾಸ್ತ,ಡಿ.ಪುಷ್ಪಾ,ಲೀಲಾವತಿ, ಸುಜಾತ, ಲೋಕಯ್ಯ ಪೂಜಾರಿ,ಸುನೀಲ್ ಕುಮಾರ್ ಪಿ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು,ಗ್ರಾಮಸ್ಥರು ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಅನುಪಾಲನ ವರದಿ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ವನಜ ಸ್ವಾಗತಿಸಿದರು.ದ್ವೀತಿಯ ದರ್ಜೆ ಲೆಕ್ಕ ಸಹಾಯಕ ರಾಜು ಜಮಾಖರ್ಚಿನ ವಿವಿರ ನೀಡಿದರು.

Related posts

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!