July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಬಾಲಕರ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ, ಸೆಮಿಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ತಂಡವನ್ನು ಸೋಲಿಸಿ, ಫೈನಲ್ ನಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಆಗಿ ಸೋಹನ್ ಕೆ ಕೆ ಹಾಗೂ ಬೆಸ್ಟ್ ಪ್ರೈಕರ್ ಮಹಮ್ಮದ್ ರಿಹಾನ್ ಇವರು ಪ್ರಶಸ್ತಿಯನ್ನು ಪಡೆದು ಕೊಂಡಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಕಾಶ್ರಿ ಡಿ.ಕೋಟ್ಯಾನ್ ಹಾಗೂ ಬೆಸ್ಟ್ ಪ್ರೈಕರ್ ಶ್ರೇಯ ಸಿ.ಎನ್ ಇವರು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕರಾದ ವಸಂತ್ ಹಾಗೂ ನಿಶ್ಚಿತ್ ಇವರು ತರಬೇತಿ ನೀಡಿರುತ್ತಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!