ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಕೊಪ್ಪದ ಬೈಲು ಜ್ಯೋತಿ ಸ್ವಸಹಾಯ ಸಂಘದ ಸದಸ್ಯ ಸೆಬಿ ಜೋಸೆಫ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿ ನಡೆದಾಡಲು ಕಷ್ಟ ಪಡುತ್ತಿದ್ದಾರೆ ಸದ್ರಿ ಸದಸ್ಯರಿಗೆ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ಶ್ರೀ ಕ್ಷೇತ್ರದಿಂದ ಮಂಜೂರಾಗಿದ್ದು ಸದ್ರಿ ಸಲಕರಣೆಯನ್ನು ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ಮತ್ತು ಹುಣ್ಸೆಕಟ್ಟೆ ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಂಘದ ಸದಸ್ಯರಾದ ಉಷಾ ಪ್ರಮೋದ್ ಮತ್ತು ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಜ್ಯೋತಿ ಉಪಸ್ಥಿತರಿದ್ದರು.

Leave a Comment

error: Content is protected !!