July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya
error: Content is protected !!