23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುಂಜಾಲಕಟ್ಟೆ: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿಯಲ್ಲಿ “ಸಹಪಠ್ಯ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯ ಅಭಿವೃದ್ಧಿ” ಎನ್ನುವ ಧ್ಯೇಯ ವಾಕ್ಯದ ಪರಿಕಲ್ಪನೆಯಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ಹಮ್ಮಿಕೊಂಡಿರುವ ಬೆಳ್ತಂಗಡಿ ತಾಲೂಕು ಮಟ್ಟದ ಈ ಸ್ಪರ್ಧೆಯು ವೇಣೂರು ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ನೇತೃತ್ವದಲ್ಲಿ ವೇಣೂರು ಪ್ರೌಢಶಾಲಾ ಸಭಾಂಗಣದಲ್ಲಿ ಆ.30ರಂದು ನಡೆಯಿತು.


ಈ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡ ರಾಷ್ಟ್ರೀಯ ಜನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅದೇ ರೀತಿ ಪಾತ್ರಾಭಿನಯ ಸ್ಪರ್ಧಿಯಲ್ಲಿ ಭಾಗವಹಿಸಿದ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ವಿಜೇತ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ಮೋಹನ್ ಕುಮಾರ್ ಅವರು ಪ್ರಮಾಣ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ ಸ್ಪರ್ಧೆಯ ತಾಲೂಕು ನೋಡಲ್ ಅಧಿಕಾರಿ ಮತ್ತು ಶಿಕ್ಷಣ ಸಂಯೋಜಕರು ಆಗಿರುವ ಸಿದ್ದಲಿಂಗಯ್ಯ ಹಾಗೂ ಶ್ರೀಮತಿ ಚೇತನಾಕ್ಷಿ, ಪುಂಜಾಲಕಟ್ಟೆಯ ಸಹ ಶಿಕ್ಷಕರಾದ ಧರಣೇಂದ್ರ ಕೆ , ಚಿತ್ರಕಲಾ ಶಿಕ್ಷಕರಾದ ಬಿ.ಎಸ್ ಬಿರಾದಾರ್, ಅತಿಥಿ ಶಿಕ್ಷಕರಾದ ಶ್ರೀಮತಿ ಜಯಶ್ರೀ, ವೇಣೂರು ಶಾಲಾ ಶಿಕ್ಷಕ ಬಳಗ ಮತ್ತು ಗಣ್ಯರು ಉಪಸ್ಥಿತರಿದ್ದರು.


ವಿಜೇತ ತಂಡಕ್ಕೆ ಪೂಂಜಾಲಕಟ್ಟೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!