27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಆ.31ರಂದು ಪಂಚದುರ್ಗ ಸಭಾಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.157 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.61.70 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ನವೀನ್ ಕುಮಾರ್ ಸದಸ್ಯರಿಗೆ 10.25% ಡಿವಿಡೆಂಟ್ ಘೋಷಿಸಿದರು.

ನಿರ್ದೇಶಕರಾದ ಅಶೋಕ್ ಭಟ್ ಪ್ರಾಸ್ತವಿಕವಾಗಿ ಮಾತನಾಡಿ ಸಂಘದ ಸದಸ್ಯರ ಸಹಕಾರದಿಂದ ಸಂಘ ಬೆಳೆಯುತ್ತಿದೆ. ಆರೋಗ್ಯ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳು ಯೋಗ್ಯ ರೀತಿಯಲ್ಲಿ ಇದ್ದರೆ ಊರು ಅಭಿವೃದ್ಧಿ ಹೊಂದುತ್ತದೆ ಎಂದು ಸಂಘದ ಬೆಳವಣಿಗೆಯ ದೃಷ್ಟಿಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ 18 ಜನ ಸಾಂಪ್ರದಾಯಿಕ ವಿಧಾನದಿಂದ ಅಡಿಕೆ ಗಿಡಗಳಿಗೆ ಬೋರ್ಡೋ ದ್ರಾವಣ ಸಿಂಪಡಣಾಕಾರರಿಗೆ ಸನ್ಮಾನ ನಡೆಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಸಂಜೀವ ಎಂ.ಕೆ., ನಿರ್ದೇಶಕರಾದ ಎನ್. ಪರಮೇಶ್ವರ ಗೌಡ, ಪುರುಷೋತ್ತಮ, ಡೀಕಯ್ಯಪೂಜಾರಿ, ಹೊನ್ನಪ್ಪ ಪೂಜಾರಿ, ಶ್ರೀಮತಿ ಗುಲಾಬಿ, ಶ್ರೀಮತಿ ರೇವತಿ, ಯತೀಶ್, ಕೇಂದ್ರ ಬ್ಯಾಂಕ್ ನ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ನಿರೂಪಿಸಿದರು. ನಿರ್ದೇಶಕರಾದ ರವೀಂದ್ರನಾಥ ಪಿ. ಸ್ವಾಗತಿಸಿ, ಉಜ್ವಲ್ ಕುಮಾರ್ ಧನ್ಯವಾದವಿತ್ತರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya
error: Content is protected !!