27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಆ.31ರಂದು ಪಂಚದುರ್ಗ ಸಭಾಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.157 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.61.70 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ನವೀನ್ ಕುಮಾರ್ ಸದಸ್ಯರಿಗೆ 10.25% ಡಿವಿಡೆಂಟ್ ಘೋಷಿಸಿದರು.

ನಿರ್ದೇಶಕರಾದ ಅಶೋಕ್ ಭಟ್ ಪ್ರಾಸ್ತವಿಕವಾಗಿ ಮಾತನಾಡಿ ಸಂಘದ ಸದಸ್ಯರ ಸಹಕಾರದಿಂದ ಸಂಘ ಬೆಳೆಯುತ್ತಿದೆ. ಆರೋಗ್ಯ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳು ಯೋಗ್ಯ ರೀತಿಯಲ್ಲಿ ಇದ್ದರೆ ಊರು ಅಭಿವೃದ್ಧಿ ಹೊಂದುತ್ತದೆ ಎಂದು ಸಂಘದ ಬೆಳವಣಿಗೆಯ ದೃಷ್ಟಿಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ 18 ಜನ ಸಾಂಪ್ರದಾಯಿಕ ವಿಧಾನದಿಂದ ಅಡಿಕೆ ಗಿಡಗಳಿಗೆ ಬೋರ್ಡೋ ದ್ರಾವಣ ಸಿಂಪಡಣಾಕಾರರಿಗೆ ಸನ್ಮಾನ ನಡೆಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಸಂಜೀವ ಎಂ.ಕೆ., ನಿರ್ದೇಶಕರಾದ ಎನ್. ಪರಮೇಶ್ವರ ಗೌಡ, ಪುರುಷೋತ್ತಮ, ಡೀಕಯ್ಯಪೂಜಾರಿ, ಹೊನ್ನಪ್ಪ ಪೂಜಾರಿ, ಶ್ರೀಮತಿ ಗುಲಾಬಿ, ಶ್ರೀಮತಿ ರೇವತಿ, ಯತೀಶ್, ಕೇಂದ್ರ ಬ್ಯಾಂಕ್ ನ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ನಿರೂಪಿಸಿದರು. ನಿರ್ದೇಶಕರಾದ ರವೀಂದ್ರನಾಥ ಪಿ. ಸ್ವಾಗತಿಸಿ, ಉಜ್ವಲ್ ಕುಮಾರ್ ಧನ್ಯವಾದವಿತ್ತರು.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya
error: Content is protected !!