September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಆ.31ರಂದು ಪಂಚದುರ್ಗ ಸಭಾಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.157 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.61.70 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ನವೀನ್ ಕುಮಾರ್ ಸದಸ್ಯರಿಗೆ 10.25% ಡಿವಿಡೆಂಟ್ ಘೋಷಿಸಿದರು.

ನಿರ್ದೇಶಕರಾದ ಅಶೋಕ್ ಭಟ್ ಪ್ರಾಸ್ತವಿಕವಾಗಿ ಮಾತನಾಡಿ ಸಂಘದ ಸದಸ್ಯರ ಸಹಕಾರದಿಂದ ಸಂಘ ಬೆಳೆಯುತ್ತಿದೆ. ಆರೋಗ್ಯ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳು ಯೋಗ್ಯ ರೀತಿಯಲ್ಲಿ ಇದ್ದರೆ ಊರು ಅಭಿವೃದ್ಧಿ ಹೊಂದುತ್ತದೆ ಎಂದು ಸಂಘದ ಬೆಳವಣಿಗೆಯ ದೃಷ್ಟಿಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ 18 ಜನ ಸಾಂಪ್ರದಾಯಿಕ ವಿಧಾನದಿಂದ ಅಡಿಕೆ ಗಿಡಗಳಿಗೆ ಬೋರ್ಡೋ ದ್ರಾವಣ ಸಿಂಪಡಣಾಕಾರರಿಗೆ ಸನ್ಮಾನ ನಡೆಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಸಂಜೀವ ಎಂ.ಕೆ., ನಿರ್ದೇಶಕರಾದ ಎನ್. ಪರಮೇಶ್ವರ ಗೌಡ, ಪುರುಷೋತ್ತಮ, ಡೀಕಯ್ಯಪೂಜಾರಿ, ಹೊನ್ನಪ್ಪ ಪೂಜಾರಿ, ಶ್ರೀಮತಿ ಗುಲಾಬಿ, ಶ್ರೀಮತಿ ರೇವತಿ, ಯತೀಶ್, ಕೇಂದ್ರ ಬ್ಯಾಂಕ್ ನ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ನಿರೂಪಿಸಿದರು. ನಿರ್ದೇಶಕರಾದ ರವೀಂದ್ರನಾಥ ಪಿ. ಸ್ವಾಗತಿಸಿ, ಉಜ್ವಲ್ ಕುಮಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!