26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಕೊಯ್ಯೂರು : ‘ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಪಂದ್ಯಾಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ವಿದ್ಯಾರ್ಥಿಗಳಿಗೆ ಶುಭಾಶಯಗೈದರು.

ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಪದವಿಪೂರ್ವ ಕಾಲೇಜುಗಳ ಬಾಲಕ -ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟನೆಗೈದು ಜಿಲ್ಲಾ ಮಟ್ಟದಲ್ಲಿ ಪಾಲ್ಗೊಲ್ಲುವ ತಾಲೂಕು ತಂಡಕ್ಕೆ ಸಮವಸ್ತ್ರವನ್ನು ನೀಡುವ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ವಹಿಸಿಕೊಂಡಿದ್ದರು.

ವೇದಿಕೆಯ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಪಾoಬೇಲು, ಶ್ರೀಮತಿ ಹೇಮಾವತಿ ಕಡಮ್ಮಜೆ, ಇಸುಬು ಹಾಗೂ ಪ್ಯಾಕ್ಸ್ ಕೊಯ್ಯೂರು ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಪ್ಯಾಕ್ಸ್ ನಿರ್ದೇಶಕ ಅಶೋಕ್ ಕುಮಾರ್ ಅಗ್ರಸಾಲೆ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕೊಯ್ಯೂರು ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾ ಕೃಷ್ಣ ತಚ್ಛಮೆ ಭಾಗವಹಿಸಿದ್ದರು. ವಿದ್ಯಾರ್ಥಿನಿ ಕುಮಾರಿ ರಂಝಿನ ಕಾರ್ಯಕ್ರಮದ ಪ್ರಾಯೋಜರಾದ ಸಲೀo ಬಿ. ಕೆ. ರೆಜಿಸ್ಟ್ರಾರ್, ಸಹಕಾರ ಇಲಾಖೆ, ಬೆಂಗಳೂರು ಮತ್ತು ಮಂಗಳೂರು ಪ್ರಾದೇಶಿಕ ಮುಖ್ಯಸ್ಥರು ಬದಿಯಡ್ಕ -ತ್ರಿ ಶೂರ್, ಕ್ಯಾಂಪ್ಕೋ ಮಂಗಳೂರು -ಇವರುಗಳ ಸಂದೇಶ ವಾಚನ ವಾಚಿಸಿದರು.


ವಿದ್ಯಾರ್ಥಿನಿಯರಾದ ರಂಝಿನ, ಭವ್ಯ, ಪ್ರಜ್ಞಾ, ವಿನಯ, ಚಿರಸ್ವಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಸ್ವಾಗತಿಸಿ, ಅರ್ಥ ಶಾಸ್ತ್ರ ಉಪನ್ಯಾಸಕಿ ತೃಪ್ತಿ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರಾದ ಶ್ರೀಮತಿ ರಶ್ಮಿ ದೇವಿ, ಶ್ರೀಮತಿ ಭವ್ಯ, ಶ್ರೀಮತಿ ಪ್ರೀತಿ, ಮಾಯಿಲ, ಸಂತೋಷ್ ಸಹಕರಿಸಿದರು.

Related posts

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya
error: Content is protected !!