25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!