September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!