22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!