23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya
error: Content is protected !!