25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಬಾಲಕರ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ, ಸೆಮಿಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ತಂಡವನ್ನು ಸೋಲಿಸಿ, ಫೈನಲ್ ನಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಆಗಿ ಸೋಹನ್ ಕೆ ಕೆ ಹಾಗೂ ಬೆಸ್ಟ್ ಪ್ರೈಕರ್ ಮಹಮ್ಮದ್ ರಿಹಾನ್ ಇವರು ಪ್ರಶಸ್ತಿಯನ್ನು ಪಡೆದು ಕೊಂಡಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಕಾಶ್ರಿ ಡಿ.ಕೋಟ್ಯಾನ್ ಹಾಗೂ ಬೆಸ್ಟ್ ಪ್ರೈಕರ್ ಶ್ರೇಯ ಸಿ.ಎನ್ ಇವರು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕರಾದ ವಸಂತ್ ಹಾಗೂ ನಿಶ್ಚಿತ್ ಇವರು ತರಬೇತಿ ನೀಡಿರುತ್ತಾರೆ.

Related posts

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!