ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ, ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡ ಮತ್ತು ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಶ್ರೀ ಕ್ಷೇತ್ರದ ಕೊಡುಗೆಗೆ ಕೃತಜ್ಞತೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಮತ್ತು ಕರಿಯಣ್ಣ ಗೌಡ ಉಪಸ್ಥಿತರಿದ್ದರು.

Leave a Comment

error: Content is protected !!