April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!