22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!