23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡ ಖಂಡಿಸಿದ್ದು. ತೆರವು ಮಾಡಿಸದೇ ಇದ್ದಲ್ಲಿ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಬಗ್ಗೆ ಅಬಕಾರಿ ನಿರೀಕ್ಷಕರಾದ ಲಕ್ಶ್ಮಣ ಉಪ್ಪಾರ ಇವರಿಗೆ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ಮತ್ತು ಊರವರಿಂದ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಣ್ಣೀರುಪಂಥ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಪ್ರಭಾಕರ್ ಗೌಡ ಪೋಸೊಂದೋಡಿ, ಜನಜಾಗೃತಿ ವೇದಿಕೆ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಗೌಡ ಮಣಿಲ, ಬಾರ್ಯ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪುತ್ತಿಲ ಜನಜಾಗೃತಿ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಯಾದವ, ಪುತ್ತಿಲ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಉಮೇಶ್, ತಣ್ಣೀರುಪಂಥ ವಲಯದ ಮೇಲ್ವಿಚಾರಕ ಗುಣಕರ್, ಸೇವಾಪ್ರತಿನಿಧಿಗಳಾದ ಶಿವರಾಮ್ ತೆಕ್ಕಾರು, ಶ್ರೀಮತಿ ಗೀತಾ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!