March 7, 2026
ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಜಾನಕಿ(50)ವರ್ಷ ಇಂದು ಸಂಜೆ ಆಗಸ್ಟ್ 31 ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಾನಕಿಯವರು ಹಲವು ವರ್ಷಗಳಿಂದ ಬಳಂಜ ಗ್ರಾಮದ ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಪುಟಾಣಿ ಮಕ್ಕಳ ಅಪಾರ ಪ್ರೀತಿಗೆ ಪಾತ್ರರಾಗಿದ್ದರು. ಊರಿನ ಜನರೊಂದಿಗೂ ಉತ್ತಮ ಸ್ನೇಹ,ಪ್ರೀತಿ ಮತ್ತು ಅನೋನ್ಯತೆಯನ್ನು ಹೊಂದಿದ್ದ ಜಾನಕಿಯವರು ಕೆಲವು ದಿನಗಳಿಂದ ಸುಸ್ತು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು ಇಂದು ಮಧ್ಯಾಹ್ನ ಬಳಂಜದ ತನ್ನ ಮನೆಯಿಂದ ಬಂಟ್ವಾಳದಲ್ಲಿರುವ ತಾಯಿ ಮನೆಗೆ ತೆರಳಿದ್ದ ಸಂದರ್ಭ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತಿ ಸಂಜೀವ,ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya
error: Content is protected !!