July 24, 2026
ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಜಾನಕಿ(50)ವರ್ಷ ಇಂದು ಸಂಜೆ ಆಗಸ್ಟ್ 31 ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಾನಕಿಯವರು ಹಲವು ವರ್ಷಗಳಿಂದ ಬಳಂಜ ಗ್ರಾಮದ ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಪುಟಾಣಿ ಮಕ್ಕಳ ಅಪಾರ ಪ್ರೀತಿಗೆ ಪಾತ್ರರಾಗಿದ್ದರು. ಊರಿನ ಜನರೊಂದಿಗೂ ಉತ್ತಮ ಸ್ನೇಹ,ಪ್ರೀತಿ ಮತ್ತು ಅನೋನ್ಯತೆಯನ್ನು ಹೊಂದಿದ್ದ ಜಾನಕಿಯವರು ಕೆಲವು ದಿನಗಳಿಂದ ಸುಸ್ತು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು ಇಂದು ಮಧ್ಯಾಹ್ನ ಬಳಂಜದ ತನ್ನ ಮನೆಯಿಂದ ಬಂಟ್ವಾಳದಲ್ಲಿರುವ ತಾಯಿ ಮನೆಗೆ ತೆರಳಿದ್ದ ಸಂದರ್ಭ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತಿ ಸಂಜೀವ,ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ಮುಂಡಾಜೆ ಕೃಷ್ಣಮೂರ್ತಿ ವೇಲಣ್ಕರ್ ನಿಧನ

Suddi Udaya
error: Content is protected !!