July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ವೇಣೂರು:ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 01ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘವು 2023-24ನೇ ಸಾಲಿನಲ್ಲಿ 328 .42 ಕೋಟಿ ವ್ಯವಹಾರ ನಡೆಸಿದ್ದು, ರೂ.1,59,04,380.70 ಲಾಭ ಗಳಿಸಿರುತ್ತದೆ . ಸಂಘದ ಸದಸ್ಯರಿಗೆ ಶೇ.20% ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಸ್ವಾಗತಿಸಿ,ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ವಾರ್ಷಿಕ ವರದಿ ಹಾಗೂ ಸಂಘದ ಲೆಕ್ಕಪತ್ರಗಳನ್ನು ಮಂಡಿಸಿದರು .

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಸುಂದರ್ ಪೂಜಾರಿ ,ನಿರ್ದೇಶಕರುಗಳಾದ ರಾಮದಾಸ್ ನಾಯಕ್, ನಾಗಪ್ಪ, ರತ್ನಾಕರ.ಬಿ ,ಸುಧೀರ್ ಭಂಡಾರಿ ,ಗಣಪತಿ ಪ್ರಸನ್ನ , ದೋಗು ನಾಯ್ಕ, ಶ್ರೀಮತಿ ಆಶಾ, ವೀಣಾ ದೇವಾಡಿಗ, ಸಂದೀಪ್ ಹೆಗ್ಡೆ ,ಎಂ. ಆರ್ ಸಂತೋಷ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದೀನ್ , ಲೆಕ್ಕಿಗರಾದ ಭರತ್ ರಾಜ್ .ಕೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಭತ್ತದ ಕೃಷಿ ಬೆಳೆಯುವ ಸಂಘದ ಸದಸ್ಯರಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಸಂಘದ ಹಿರಿಯ 12 ಮಂದಿ ಸದಸ್ಯರನ್ನು ಗೌರವಿಸಲಾಯಿತು. ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕರಿಮಣೇಲು ಗ್ರಾಮದ ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ, ಹೈನುಗಾರಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ಹರೀಶ್ ನೀರಪಲ್ಕೆ ಹಾಗೂ ಉತ್ತಮ ಪ್ರಗತಿಪರ ಕೃಷಿ ಕೃಷಿಕರಾದ ಗುಣಪಾಲ ಅತಿಕಾರಿ ಕಡಂಬಿಲ ಇವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ಸುಧೀರ್ ಭಂಡಾರಿ ಧನ್ಯವಾದ ಸಲ್ಲಿಸಿದರು.

Related posts

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!