25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪಡಂಗಡಿ: 1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂದರ್ಬ ಬಂದಿದೆ.

ತಾಲೂಕಿನ ಜನರಿಗೆ ತಮ್ಮ ಜೀವನವನ್ನ ಕಟ್ಟಿಕೊಳ್ಳಲು ಬೇಕಾದ ಶಕ್ತಿಯನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡಿದೆ ಜೀವನಕ್ಕೆ ಬೇಕಾದ ಅರ್ಥಿಕ ಸಹಕಾರ, ವಿದ್ಯಾಭ್ಯಾಸಕ್ಕೆ ಬೇಕಾದ ಸುಜ್ಞಾನ ನಿಧಿ ಶಿಷ್ಯ ವೇತನ, ಮೂಲ ಸೌಕರ್ಯ ಅಭಿವೃದ್ಧಿಗೆ ಪೂರಕವಾದ ಮನೆ ರಚನೆಗೆ ಸಹಕಾರ ಅನಾರೋಗ್ಯ ಪೀಡಿತ ರೀಗೆ ಆರೋಗ್ಯದ ಸಂಕಲ್ಪಕೆ ಸಂಪೂರ್ಣ ಸುರಕ್ಷಾ, ಅರ್ಥಿಕ ಭದ್ರತೆಯ ಕ್ರೋಢೀಕರಣಕ್ಕೆ ಒದ್ದಾಟ ಮಾಡುತ್ತಿದ್ದ ಬಡ ಜನರಿಗೆ ಆರ್ಥಿಕ ಸಬಲೀಕರಣ ವನ್ನು ಕಲ್ಪಿಸಿ ಸ್ವಾವಲಂಬನೆಯ ಬದುಕನ್ನ ಪ್ರಗತಿ ಬಂಧು ಸ್ವಸಹಾಯ ಸಂಘಗಳು ಒದಗಿಸಿದೆ ಎಂದು ಬೆಳ್ತಂಗಡಿ ತಾಲೂಕು ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರು ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಗರ್ಡಾಡಿ ವಲಯದ ಪಡOಗಡಿಯ ಸಮೃದ್ಧಿ ಸಬಾ ಭವನದಲ್ಲಿ ಆಯೋಜಿಸಲಾದ ಪಡOಗಡಿ ಹಾಗು ಕನ್ನಡಿ ಕಟ್ಟೆ ಒಕ್ಕೂಟ ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ನೂತವಾಗಿ ರಚನೆಯಾದ ಒಕ್ಕೂಟಗಳ ಪದಾಧಿಕಾರಿಗಳಿಗೆ ನಾಯಕತ್ವ ಗುಣವನ್ನು ಬೆಳೆಸಿ ಕೊಂಡು ಕಾರ್ಯ ನಿರ್ವಹಿಸಬೇಕೆಂದು ಶುಭ ಹಾರೈಸಿದರು.

ಸಾಧಕರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇ ಗೌಡರವರು ಯೋಜನೆಯ ಮೂಲ ಉದ್ದೇಶ ಸೇವೆ ಮತ್ತು ಪರಿಕಲ್ಪನೆ ಸತ್ಯ ಎಂದರೆ ಕಷ್ಟದಲ್ಲಿ ಇರುವ ವ್ಯಕ್ತಿಗೆ ಸಹಕಾರ ನೀಡುವುದು ದುಶ್ಚಟಗಳ ವಿರುದ್ಧ, ಮೂಡನಂಬಿಕೆ ಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ
ವಿವಿಧ ರೀತಿಯಲ್ಲಿ ಬರುವ ಸಮಸ್ಯೆಗಳನ್ನ ನಿಭಾಯಿಸುವ ಕೌಶಲ್ಯ ವನ್ನು ಬೆಳೆಸಿಕೊಳ್ಳಬೇಕು ಜಾತಿ ಮತ ಧರ್ಮ ರಾಜಕೀಯ ವನ್ನು ಮೀರಿ ಎಲ್ಲರಿಗೂ ಒಂದೇ ರೀತಿಯ ಕಾರ್ಯಕ್ರಮಗಳನ್ನ ಯೋಜನೆಯು ನೀಡಿದೆ ಸ್ವ ಉದ್ಯೋಗ ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತರಬೇತಿಯನ್ನು ನೀಡಿ ಅರ್ಥಿಕ ಸಹಕಾರ ವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಒದಗಿಸಲಾಗುತ್ತಿದೆ ಇದರಿಂದಾಗಿ ಆರ್ಥಿಕ ಪ್ರಗತಿ ಯ ಮೂಲಕ ಬಡ ಕುಟುಂಬ ಗಳ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದರು.

ದೇವಸ್ಥಾನಗಳ ಅಭಿವೃದ್ದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ದೇಣಿಗೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಸಂಘ ಸಂಸ್ಥೆ ಗಳಿಗೆ, ಶಾಲೆಯ ಅಭಿವೃದ್ಧಿಗೆ, ಸಮುದಾಯ ಭವನಕ್ಕೆ ಅನುದಾನಗಳನ್ನು ಒದಗಿಸಿ ಸಮುದಾಯದ ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗುತ್ತಿದೆ ಬದುಕಿನಲ್ಲಿ ಕೀಳರಿಮೆ ಇಟ್ಟುಕೊಳ್ಳಬಾರದು ನಮ್ಮ ದೇಶದ ದೊಡ್ಡ ಸಂಪತ್ತು ಮಾನವ ಸಂಪತ್ತು ಅದರ ಸದ್ಬಳಕೆ ಆಗಬೇಕು ನಮ್ಮ ಏಳಿಗೆಯನ್ನು ನಾವೇ ಮಾಡಿಕೊಳ್ಳಬೇಕು ಅಭಿವೃದ್ದಿಗೆ ಪೂರಕವಾದ ಯೋಜನೆಯನ್ನ ಹಾಕಿಕೊಂಡು ನಾವೇ ಅದರ ಅನುಷ್ಟಾನ ಮಾಡಿದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು ದುಡಿಯುವ ಸಮಯದಲ್ಲಿ ದುಡಿದು ಭವಿಷ್ಯದ ಹಿತ ದೃಷ್ಟಿಯಿಂದ ಉಳಿತಾಯ ಮಾಡಿದರೆ ಮುಂದಿನ ಬದುಕು ನೆಮ್ಮದಿಯಿಂದ ಕೂಡಿರುತ್ತದೆ ಎಂದು ವಿವರಿಸಿದರು.

ಪಡOಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಜೈನ್ ರವರು ಮಾತನಾಡುತ್ತ ಸಮಾಜಕ್ಕೆ ಮಾದರಿಯಾಗಿ ಸಮಾಜಕ್ಕೆ ಸೇವೆ ನೀಡುವ ಕೆಲಸವನ್ನು ಯೋಜನೆ ಮಾಡಿದ ಪರಿಣಾಮ ಸಂತೋಷ ದಿಂಡ ಬದುಕುವ ವಾತಾವರಣ ಪ್ರತಿಯೊಂದೂ ಹಳ್ಳಿಯಲ್ಲಿಯೂ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರೆ ಫಾ ರೋಶನ್ ಕ್ರಾಸ್ತಾ ಧರ್ಮಗುರುಗಳು, ಆಡಳಿತ ಅಧಿಕಾರಿ ಸಂತ ರಫಾಯಲ್ ಚರ್ಚ್ fr L.M ಪಿಂಟೋ ಆಸ್ಪತ್ರೆ ಬದ್ಯಾರ್ ರವರು ಮಾತನಾಡುತ್ತ ಮನುಷ್ಯನಿಗೆ ಯಾವಾಗ ಕಾಯಿಲೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಇಂಥಹ ಸಂದರ್ಬದಲ್ಲಿ ಕುಟುಂಬ ಸಂದಿಗ್ತ ಪರಿಸ್ಥಿತಿ ಗೆ ಒಳಗಾಗುತ್ತದೆ ಪ್ರಗತಿ ಬಂಧು ಸ್ವಸಹಾಯ ಸಂಘಗಳು ಕಷ್ಟ ಕಾಲದಲ್ಲಿ ಸಹಕಾರಿ ಅಗುತ್ತದೆ ಸರ್ವ ಧರ್ಮದ ಸದಸ್ಯರು ಸೇರಿದಾಗ ಮಾತ್ರಾ ಸಮಗ್ರ ಅಭಿವೃದ್ದಿ ಅಗುತ್ತದೆ ಎಲ್ಲಾರೂ ತಮ್ಮ ಆರೋಗ್ಯದ ಕಡೆಗೆ ಗಮನ ನೀಡಬೇಕೆಂದು ಮನವರಿಕೆ ಮಾಡಿದರು ವೇದಿಕೆಯಲ್ಲಿ ಶ್ರೀ. ಪಿ. ಹೆಚ್. ಮುಹಮ್ಮದ್ ಆಶ್ರಫ್ ಧರ್ಮಗುರುಗಳು, ಮೊಹಿದ್ದೀನ್ ಜಮ್ಮಾ ಮಸೀದಿ ಪಡOಗಡಿ, ಶ್ರೀ ಆಂಥೋನಿ ಫೆರ್ನಾಂಡಿಸ್,ಅದ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡOಗಡಿ, ದ. ಕ 1 ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್, ನೂತನ ಒಕ್ಕೂಟದ ಅಧ್ಯಕ್ಷ ರಾದ ಸುರೇಶ್ ಪೂಜಾರಿ, ಉಸ್ಮಾನ್, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವಿನೋದಾ ಉಪಸ್ಥಿತರಿದ್ದರು.

ಸಬಾದ್ಯಕ್ಷತೆಯನ್ನು ಪಡOಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಸುವರ್ಣ ವಹಿಸಿದ್ದರು

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಸ್ವಾಗತಿಸಿದರು, ಸೇವಾ ಪ್ರತಿನಿಧಿ ಶ್ರೀಮತಿ ರೇಷ್ಮಾ ವರದಿ ಮಂಡಿಸಿದರು ಮೇಲ್ವಿಚಾರಕರಾದ ಗುಣಕರ್, ವಸಂತ ನಿರೂಪಿಸಿದರು ವಲಯ ಮೇಲ್ವಿಚಾರಕ ರಾದ ಶ್ರೀಮತಿ ಹೇಮಾವತಿ ಧನ್ಯವಾದವಿತ್ತರು ಗುರುವಾಯನಕೆರೆ ವಲಯ ಮೇಲ್ವಿಚಾರಕ ರಾದ ಶ್ರೀಮತಿ ಯಶೋದಾ, ಕನ್ನಡಿ ಕಟ್ಟೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸ್ವಾತಿ ಸಹಕರಿಸಿದರು

Related posts

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
error: Content is protected !!