23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಜಾನಕಿ(50)ವರ್ಷ ಇಂದು ಸಂಜೆ ಆಗಸ್ಟ್ 31 ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಾನಕಿಯವರು ಹಲವು ವರ್ಷಗಳಿಂದ ಬಳಂಜ ಗ್ರಾಮದ ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಪುಟಾಣಿ ಮಕ್ಕಳ ಅಪಾರ ಪ್ರೀತಿಗೆ ಪಾತ್ರರಾಗಿದ್ದರು. ಊರಿನ ಜನರೊಂದಿಗೂ ಉತ್ತಮ ಸ್ನೇಹ,ಪ್ರೀತಿ ಮತ್ತು ಅನೋನ್ಯತೆಯನ್ನು ಹೊಂದಿದ್ದ ಜಾನಕಿಯವರು ಕೆಲವು ದಿನಗಳಿಂದ ಸುಸ್ತು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು ಇಂದು ಮಧ್ಯಾಹ್ನ ಬಳಂಜದ ತನ್ನ ಮನೆಯಿಂದ ಬಂಟ್ವಾಳದಲ್ಲಿರುವ ತಾಯಿ ಮನೆಗೆ ತೆರಳಿದ್ದ ಸಂದರ್ಭ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತಿ ಸಂಜೀವ,ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!